ಬ್ರೇಕಿಂಗ್ ನ್ಯೂಸ್
Search

ಏ.27ರಂದು ಮೈಸೂರಿನಲ್ಲಿ ಬುದ್ಧಗೀತೆ ಗಾಯನ ಸ್ಪರ್ಧೆ

187

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಮೈಸೂರು: ಬುದ್ಧ ಪೂರ್ಣಿಮೆ ಪ್ರಯುಕ್ತ ಮೈಸೂರಿನ ತನುಮನ ಸಂಸ್ಥೆ ಏಪ್ರಿಲ್ 27ರಂದು ಬುದ್ಧಗೀತೆ ಗಾಯನ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯ ಮಟ್ಟದ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು ಎಂದು ಖ್ಯಾತ ಗಾಯಕ ಲಕ್ಷ್ಮಿರಾಮ್ ಹೇಳಿದ್ದಾರೆ.

14-23 ವರ್ಷ ವಯಸ್ಸಿನವರು ಇದರಲ್ಲಿ ಭಾಗವಹಿಸಬಹುದು. ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ ಹಾಗೂ ತೃತೀಯ ಬಹುಮಾನ 1 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಬುದ್ಧಗೀತೆ ಇಲ್ಲದವರಿಗೆ ಗೀತೆಗಳನ್ನು ಒದಗಿಸಲಾಗುವುದು. ಈ ನಂಬರಿಗೆ (9901313740) ಸಂರ್ಪಕಿಸಬಹುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!