ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 2022-23ನೇ ಸಾಲಿನ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಇಂದು ಮಂಡಿಸಿದರು. ಈ ಬಾರಿಯ ಬಜೆಟ್ ನಲ್ಲಿ ಜನಸಾಮಾನ್ಯರಿಗೆ ಏನೆಲ್ಲ ನೀಡಲಾಗಿದೆ. ಯಾರಿಗೆ ಅನುಕೂಲವಾಗಿದೆ ಅನ್ನೋದರ ವಿಶ್ಲೇಷಣೆ ನಡೆದಿದೆ.
ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ತೆರಿಗೆ ಪಾವತಿಯಲ್ಲಿನ ತಪ್ಪು ಸರಿಪಡಿಸಲು 2 ವರ್ಷ ಕಾಲಾವಕಾಶ ನೀಡಲಾಗುವುದು ಎಂದಿದ್ದಾರೆ. ಸಹಕಾರಿ ಸಂಘಗಳ ಸರ್ಚ್ ಚಾರ್ಜ್ ಶೇಕಡ 12ರಿಂದ 7ಕ್ಕೆ ಇಳಿಕೆ ಮಾಡಲಾಗಿದೆ. ಬಟ್ಟೆ, ಚಪ್ಪಲಿ, ಮೊಬೈಲ್ ಚಾರ್ಜರ್ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ.
ಕೃಷಿ ಉತ್ಪನ್ನ ಹಾಗೂ ವಿದೇಶಿ ಉತ್ಪನ್ನಗಳ ಮೇಲಿನ ಬೆಲೆ ಇಳಿಕೆ ಮಾಡಲಾಗಿದೆ. ಚರ್ಮದ ಉತ್ಪನ್ನಗಳು, ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಯೂ ಇಳಿಕೆ ಮಾಡಲಾಗಿದೆ. ವಜ್ರಾಭರಣಗಳ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಲಾಗಿದೆ. ಡೈಮೆಂಡ್ ಕಸ್ಟಮ್ಸ್ ಡ್ಯೂಟಿ ಶೇ.5ರಷ್ಟು ಕಡಿತಗೊಳಿಸಲಾಗಿದೆ.
ಇನ್ನು ಕೃಷ್ಣಾ-ಗೋಧಾವರಿ, ಪೆನ್ನಾರ್-ಕಾವೇರಿ, ಕೃಷ್ಣಾ-ಪೆನ್ನಾರ್ ನದಿಗಳ ಜೋಡಣೆಗೆ ಒಪ್ಪಿಗೆ ನೀಡಲಾಗಿದೆ. ಅಕ್ರಮ ಆಸ್ತಿಗೆ ಕಡಿವಾಣ ಹಾಕಲು ಒನ್ ನೇಷನ್ ಒನ್ ರಿಜಿಸ್ಟ್ರೇಶನ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ದೇಶದ 8 ಭಾಷೆಗಳಲ್ಲಿ ಆಸ್ತಿ ನೋಂದಣಿ ನಡೆಯಲಿದೆ. ಹೀಗೆ ಹಲವು ಪ್ರಮುಖ ವಿಚಾರಗಳಲ್ಲಿ ಈ ಬಾರಿಯ ಬಜೆಟ್ ನಲ್ಲಿ ಅವಕಾಶ ನೀಡಲಾಗಿದೆ.
ಭಾರತ ಈ ಆರ್ಥಿಕ ವರ್ಷದಲ್ಲಿ ಶೇಕಡ 9.2ರಷ್ಟು ಬೆಳವಣಿಗೆ ನಿರೀಕ್ಷೆ ಮಾಡುತ್ತಿದೆ. ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇನ್ನು ಓಮಿಕ್ರಾನ್ ಹಾವಳಿ ನಡುವೆಯೂ ಲಸಿಕೆ ಅಭಿಯಾನದ ವೇಗ ಹೆಚ್ಚಾಗಲಿದೆ. ನಾವು ಅಭಿವೃದ್ಧಿ ಹೊಂದುತ್ತೇವೆ ಅನ್ನೋ ವಿಶ್ವಾಸವಿದೆ ಎಂದು ವಿತ್ ಸಚಿವೆ ನಿರ್ಮಲಾಸೀತಾರಾಮನ್ ಹೇಳಿದರು.