ಡಾ.ಪುನೀತ್ ಸ್ಮರಣಾರ್ಥ ಆರೋಗ್ಯ ಸೇವೆ

117

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಚಂದನವನದ ನಟ ದಿವಂಗತ ಡಾ.ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಆರೋಗ್ಯ ಸೇವೆಯನ್ನು ಘೋಷಿಸಲಾಗಿದೆ.

ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪ್ರತಿ ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ AED(Automated External Defibrillators) ಅಳವಡಿಸಲು ತೀರ್ಮಾನಿಸಲಾಗಿದೆ. ನಟ ಪುನೀತ್ ರಾಜಕುಮಾರ್ ಹಠಾತ್ ಹೃದಯಾಘಾತದಿಂದಾಗಿ ಅಕ್ಟೋಬರ್ 29, 2021ರಂದು ಬೆಂಗಳೂರಿನಲ್ಲಿ ನಿಧನರಾದರು.

ಪುನೀತ್ ಬದುಕಿದ್ದ ಸಂದರ್ಭದಲ್ಲಿ ಯಾರಿಗೂ ತಿಳಿಯದ ಹಾಗೆ ಮಾಡುತ್ತಿದ್ದ ಅಪಾರ ಪ್ರಮಾಣದ ಸಮಾಜ ಸೇವೆ ಬೆಳಕಿಗೆ ಬಂದಿತು. ಸಾಮಾಜಿಕ ಸೇವೆಯನ್ನು ಸದ್ದು, ಸುದ್ದಿ ಇಲ್ಲದೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದರು. ಹೀಗಾಗಿ ಅವರ ಹೆಸರಿನಲ್ಲಿ ನಿತ್ಯ ಒಂದಲ್ಲ ಒಂದು ಕಾರ್ಯಕ್ರಮಗಳು, ಸೇವೆಗಳು ನಡೆಯುತ್ತಿವೆ.




Leave a Reply

Your email address will not be published. Required fields are marked *

error: Content is protected !!