ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜುಲೈ 3ರಿಂದ 7ರ ತನಕ ಬಜೆಟ್ ಅಧಿವೇಶನ ನಡೆಯಲಿದೆ. ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಧಾನಸೌಧದ ಸುತ್ತಮುತ್ತ ಯಾವುದೇ ರೀತಿಯ ಪ್ರತಿಭಟನೆ, ಧರಣಿ, ಹೋರಾಟಗಳನ್ನು ನಡೆಸದಂತೆ ನಿರ್ಬಂಧಿಸಲಾಗಿದೆ.
ಮೊದಲ ದಿನ ರಾಜ್ಯಪಾಲರು ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಬಗ್ಗೆ ತೀವ್ರ ಚರ್ಚೆ ನಡೆಯಲಿದೆ. ಅನ್ಯಭಾಗ್ಯ ಯೋಜನೆಯಲ್ಲಿ ಸರ್ಕಾರದ ಪರಿಸ್ಥಿತಿಯನ್ನು ಅಸ್ತ್ರವಾಗಿಸಿಕೊಂಡು ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿವೆ.
ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ಸರ್ಕಾರದ ನಿರ್ಧಾರವನ್ನು ವಿಪಕ್ಷಗಳು ವಿರೋಧಿಸಲಿದ್ದು, ಕಲಾಪ ಎಷ್ಟರ ಮಟ್ಟಿಗೆ ಸುಗಮವಾಗಿ ಸಾಗುತ್ತೆ ಅನ್ನೋ ಕುತೂಹಲವಿದೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದು, ಯಾವ ಕ್ಷೇತ್ರಕ್ಕೆ ಏನೇನು ಸಿಗುತ್ತೆ ಅನ್ನೋ ನಿರೀಕ್ಷೆ ಹೆಚ್ಚಾಗಿದೆ.