ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಿದ ಸರ್ಕಾರ: ಬಿಜೆಪಿ

189

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಜೆಟ್ ಅಧಿವೇಶನದ ಭಾಷಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಬಿಜೆಪಿ ಸರ್ಕಾರದ ಯೋಜನೆಗಳನ್ನು ತಮ್ಮದೆಂದು ಸುಳ್ಳು ಹೇಳಿಸಿದ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ಯುವನಿಧಿ ಯೋಜನೆಯ ಹಣ ಇನ್ನು ನಿರುದ್ಯೋಗಿಗಳಿಗೆ ತಲುಪಿಲ್ಲ. ಬರ ಪರಿಹಾರ ಕಂತು ಕಂತಾಗಿ ನೀಡುವುದಲ್ಲ. ಒಟ್ಟಿಗೆ ನೀಡಬೇಕು. ಪರಿಶಿಷ್ಟರ ಮೀಸಲು ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ, ನಾವು ಬಂದ ಮೇಲೆ ರೈತರ ಆತ್ಮಹತ್ಯೆ ಕಡಿಮೆಯಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ. ತಮ್ಮ ಆರ್ಥಿಕ ವೈಫಲ್ಯ ಮುಚ್ಚಿಸಿಕೊಳ್ಳಲು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾತನಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.




Leave a Reply

Your email address will not be published. Required fields are marked *

error: Content is protected !!