ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ: ಸಾವಿರಾರು ಲೀಟರ್ ಮದ್ಯ ವಶ

467

ಲಿಂಗಸೂರು: ಲಾಕ್ ಡೌನ್ ನಿಂದಾಗಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಹೀಗಾಗಿ ಕುಡುಕರು ನಾನಾ ಅಡ್ಡದಾರಿಗಳನ್ನ ಹಿಡಿಯುತ್ತಿದ್ದಾರೆ. ಕೆಲವರು ಇದನ್ನೆ ಬಂಡವಾಳ ಮಾಡಿಕೊಂಡು ಮತ್ತೆ ಕಳ್ಳಭಟ್ಟಿ ದಂಧೆ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಮತ್ತೆ ಕಳ್ಳಭಟ್ಟಿ ದಂಧೆ ಸುದ್ದು ಮಾಡ್ತಿದ್ದು, ಲಿಂಗಸೂರು ಬಳಿ ಅಬಕಾರಿ ಇಲಾಖೆ ಹಾಗೂ ಪೊಲೀಸ್ರು ದಾಳಿ ಮಾಡಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಜಕ್ಕೆರುಮಡು ತಾಂಡಾದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಸಾವಿರಾರು ಲೀಟರ್ ನಷ್ಟು ಬೆಲ್ಲದ ಕೊಳೆ ಜಪ್ತಿ ಮಾಡಲಾಗಿದೆ. ಈ ವೇಳೆ ತಾಂಡಾ ನಿವಾಸಿಗಳು ಓಡಿ ಹೋಗಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!