ವಿಜಯಪುರ: ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಸಾಗಿಸುತ್ತಿದ್ದ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ವಿಜಯಪುರ ತಾಲೂಕಿನ ಭೂತನಾಳ ತಾಂಡಾ ಬಳಿ ಆರೋಪಿಯನ್ನ ಬಂಧಿಸಲಾಗಿದೆ. ಸೋಮನಿಂಗ ಹೊನಗೊಂಡ ಬಂಧಿತ ಆರೋಪಿಯಾಗಿದ್ದೇನೆ.
ಪ್ಲಾಸ್ಟಿಕ್ ಬಾಟಲ್ ಗಳಲ್ಲಿ 14 ಲೀಟರ್ ನಷ್ಟು ಸಾರಾಯಿ ತುಂಬಿಸಿ ಬೈಕ್ ನಲ್ಲಿ ಕಳ್ಳಭಟ್ಟಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಂದು ಬೈಕ್ ಹಾಗೂ ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿದ್ದಾರೆ. ಈ ಕುರಿತು ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.