ಪ್ರಜಾಸ್ತ್ರ ಸುದ್ದಿ
ಕಾನ್ಪುರ್: ಉತ್ತರ ಪ್ರದೇಶದ ಕಾನ್ಪುರ್ ಹತ್ತಿರದ ಸಚೇಂದಿ ಪ್ರದೇಶದಲ್ಲಿ ಮಂಗಳವಾರ ಮಧ್ಯರಾತ್ರಿ ಬಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದೆ. ಇದ್ರಿಂದಾಗಿ ಬರೋಬ್ಬರಿ 17 ಜನ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ಕುರಿತು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಸಿಎಂ ಯೋಗಿ ಆದಿತ್ಯನಾಥ ತನಿಖೆ ನಡೆಸುವಂತೆ ಆದೇಶಿಸಿದ್ದು, ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.