ಪ್ರಜಾಸ್ತ್ರ ಸುದ್ದಿ
ದೊಡ್ಡಬಳ್ಳಾಪುರ: ಮದುವೆಯ ಆರತಕ್ಷತೆಗೆ ಬಂದವರನ್ನು ಸ್ವಗ್ರಾಮಕ್ಕೆ ಕರೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ 15 ಜನ ಗಾಯಗೊಂಡಿದ್ದಾರೆ. ಬೆಳಚಿಕ್ಕನಹಳ್ಳಿ ಹತ್ತಿರ ಈ ಘಟನೆ ನಡೆದಿದೆ.
ರಾಮಕೃಷ್ಣ ರೆಡ್ಡಿ ಹಾಗೂ ಪಿ.ಎಸ್ ಕುಮಾರ್ ಮೃತ ದುರ್ದೈವಿಗಳು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಹಾಗೂ ಗೌರಿಬಿದನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಘಾಟಿ ಸುಬ್ರಹ್ಮಣ್ಯ ಹತ್ತಿರದ ಖಾಸಗಿ ಕಲ್ಯಾಣಮಂಟಪದಲ್ಲಿ ಶನಿವಾರ ರಾತ್ರಿ ಮದುವೆಯ ಆರತಕ್ಷತೆ ಇಟ್ಟುಕೊಳ್ಳಲಾಗಿತ್ತು.
ಚಾಲಕನ ನಿಯಂತ್ರಣ ತಪ್ಪಿ ರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ. ಇದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.