ಮಹಾರಾಷ್ಟ್ರದಲ್ಲಿ ಬಸ್ ಅಪಘಾತ: 25 ಪ್ರಯಾಣಿಕರ ದುರ್ಮರಣ

339

ಪ್ರಜಾಸ್ತ್ರ ಸುದ್ದಿ

ಮುಂಬೈ: ಚಲಿಸುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬರೋಬ್ಬರಿ 25 ಪ್ರಯಾಣಿಕರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಾಹಾಮಾರ್ಗ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಬೆಳಗಿನಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸಿಂಧಖೇದರಾಜ ಹತ್ತಿರದ ಪಿಂಪಲಖುಟಾ ಗ್ರಾಮದ ಹತ್ತಿರದ ಹೆದ್ದಾರಿ ಬಳಿ ಅವಗಡ ನಡೆದಿದೆ. ಬಸ್ ವಿದರ್ಭ ಟ್ರಾವಲ್ಸ್ ಗೆ ಸೇರಿದ್ದಾಗಿದೆ. ಬಸ್ಸಿನಲ್ಲಿ ನಾಗ್ಪುರ, ವಾರ್ಧ ಹಾಗೂ ಯವತ್ಮಾಲ್ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದು. 25 ಜನರು ಪ್ರಾಣ ಕಳೆದುಕೊಂಡಿದ್ದಾರೆ. 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ದಾನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಮೊದಲು ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಿದ್ದ ರಭಸಕ್ಕೆ ಡೀಸೆಲ್ ಟ್ಯಾಂಕರ್ ಒಡೆದು ಸ್ಪಾರ್ಕ್ ಆಗಿ ಬೆಂಕಿ ಆವರಿಸಿಕೊಂಡಿದೆ. ಇದರಿಂದಾಗಿ ಇಷ್ಟೊಂದು ಪ್ರಮಾಣದಲ್ಲಿ ಪ್ರಯಾಣಿಕರ ಸಾವಾಗಿದೆ ಎಂದು ಶಂಕಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!