ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಹತ್ತಿರ ಖಾಸಗಿ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಒತ್ತಾಯಿಸಿದ್ದಾರೆ.
ಪರಿಷತ್ ನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಬಸ್ ದುರಂತದಲ್ಲಿ ವಿದ್ಯಾರ್ಥಿಗಳು ಸೇರಿ ಹಲವರು ಮೃತಪಟ್ಟಿದ್ದಾರೆ. ಸರ್ಕಾರ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ. ಅದರ ಬದಲು 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದರು.
ಇದರಲ್ಲಿ ಕೆಎಸ್ಆರ್ ಟಿಸಿ ಬಸ್ ಡಿಪೋದ ಅಧಿಕಾರಿಗಳು ಹಾಗೂ ಖಾಸಗಿ ಮಾಲೀಕರ ನಡುವೆ ಅನೈತಿಕ ಮೈತ್ರಿಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮೊದಲು ಇದನ್ನು ಸರಿಪಡಿಸಿ ಅಂತಾ ಆಗ್ರಹಿಸಿದರು.