ಅಲ್ಲಿ ಜನರ ಸಾವು.. ಇಲ್ಲಿ ಸಿಎಂ ಸಿನಿಮಾ ಮಸ್ತಿ..

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿನ್ನೆ ನಡೆದುಕೊಂಡ ರೀತಿಯ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳ್ಳವಳ್ಳಿ ಬಳಿ ಖಾಸಗಿ ಅಪಘಾತದಲ್ಲಿ 6 ಜನರ ಸಾವರು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ದುರಂತ ಸಂಭವಿಸಿದೆ, ಅಲ್ಲಿಗೆ ಹೋಗದೆ ಆರ್ ಆರ್ ಆರ್ ಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಹೋಗಿದ್ದು ಎಷ್ಟು ಸರಿ ಅನ್ನೋ ಪ್ರಶ್ನೆ ಎದ್ದಿದೆ.

ತನ್ನ ರಾಜ್ಯದ ಜನರ ನೋವಿನಲ್ಲಿ ಇರಬೇಕಾದ ಸಿಎಂ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಅಂದರೆ ಏನು ಹೇಳಬೇಕು ಎಂದು ಕಿಡಿ ಕಾರುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!