ಬಸ್ ಪಲ್ಟಿ: ಅದೃಷ್ಟವಶಾತ್ 30ಕ್ಕೂ ಹೆಚ್ಚು ಜನರ ಜೀವ ಉಳಿಯಿತು

363

 ಪ್ರಜಾಸ್ತ್ರ ಸುದ್ದಿ

ಹಾವೇರಿ: ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 35ಕ್ಕೂ ಹೆಚ್ಚು ಜನರ ಜೀವ ಉಳಿದಿದೆ. ಬ್ರೇಕ್ ಫೇಲ್ ಆಗಿ ಈ ಅನಾಹುತ ಸಂಭವಿಸಿದೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗನಿಂದ ರಾಣೇಬೆನ್ನೂರಿಗೆ ತೆರಳುತ್ತಿದ್ದ ಬಸ್ ನ ಬ್ರೇಕ್ ಫೇಲ್ ಆಗಿದೆ. ಡ್ರೈವರ್ ಬಸ್ ನಿಲ್ಲಿಸಲು ನೋಡು ನೋಡ್ತಿದ್ದಂತೆ ಪಲ್ಟಿಯಾಗಿದೆ. ಬ್ಯಾಡಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!