ಬಸ್ ದುರಂತಕ್ಕಿಂತ ಸಿಎಂಗೆ ಸಿನಿಮಾ ಮುಖ್ಯ: ಹೆಚ್ಡಿಕೆ

466

ಪ್ರಜಾಸ್ತ್ರ ಸುದ್ದಿ

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಹತ್ತಿರ ಖಾಸಗಿ ಬಸ್ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಅವರು ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಬಸ್ ದುರಂತಕ್ಕಿಂತ ಅವರಿಗೆ ಸಿನಿಮಾ ಮುಖ್ಯವಾಗಿದೆ. ಆರ್.ಆರ್.ಆರ್ ಸಿನಿಮಾ ಪ್ರಮೋಷನ್ ನಲ್ಲಿ ಭಾಗಿಯಾಗಿ 4 ಗಂಟೆ ಕಾಲಹರಣ ಮಾಡಿದ್ದಾರೆ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!