ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕ ಸಾವು, 9 ಜನರಿಗೆ ಗಾಯ

231

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಸೋಮವಾರ ನಸುಕಿನ ಜಾವದಲ್ಲಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಮೃತಪಟ್ಟಿದ್ದು, 9 ಜನರು ಗಾಯಗೊಂಡಿದ್ದಾರೆ.

ಕಮಲಾಪೂರ ತಾಲೂಕಿನ ಕುರಿಕೋಟ ಗ್ರಾಮದ ಹತ್ತಿರ ನಡೆದಿದೆ. ಬಳ್ಳಾರಿಯಿಂದ ಬೀದರ ಕಡೆಗೆ ಬಸ್ ಚಲಿಸುತ್ತಿತ್ತು. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಗಾಂವ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!