ಪ್ರಜಾಸ್ತ್ರ ಸುದ್ದಿ
ಧಾರವಾಡ: ಮದುವೆಗೆ ಹೊರಟಿದ್ದ ಬಸ್ ವೊಂದರ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದ ಘಟನೆ ನವಲೂರು ಬಳಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಅನಾಹುತವಾಗಿಲ್ಲ. ಹುಬ್ಬಳಿ ಕಡೆ ಮದುವೆಗೆ ಹೊರಟಿದ್ದ ಬಸ್ ನವಲೂರು ಬಳಿ ಬರುತ್ತಿದ್ದಾಗ ಬ್ರೇಕ್ ಫೇಲ್ ಆಗಿದೆ.
ಬಸ್ ಕೂಡಲೇ ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು ಸೇತುವೆಯ ತಡೆಗೋಡೆಗೆ ಡಿಕ್ಕಿಹೊಡೆಸಿದ್ದಾನೆ. ಇದರಿಂದಾಗಿ ಮುರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೊರತುಪಡಿಸಿದರೆ ಯಾವುದೇ ಅನಾಹುತ ಸಂಭವಿಸಿಲ್ಲ. ಧಾರವಾಡ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಬಸ್ ಕೊಪ್ಪಳ ಡಿಪೋಗೆ ಸೇರಿದ್ದು ಎನ್ನಲಾಗುತ್ತಿದೆ.