ವಿಜಯಪುರ: ಕೆಎಸ್ಆರ್ ಟಿಸಿ ಬಸ್ಸೊಂದು ರಸ್ತೆ ಬಿಟ್ಟು ಪಕ್ಕದ ಜಮೀನಿಗೆ ನುಗ್ಗಿದ ಘಟನೆ ಇಂದು ಬೆಳಗಿನ ಜಾವ ಯರನಾಳ ಗ್ರಾಮದ ಬಳಿ ನಡೆದಿದೆ.
ರಾಯಚೂರನಿಂದ ವಿಜಯಪುರಕ್ಕೆ ಹೊರಟಿದ್ದ ಬಸ್ ನಸುಕಿನಲ್ಲಿ ಸುಮಾರು 4.30ರ ವೇಳೆಗೆ ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದ ಬಳಿ ಚಾಲಕನ ನಿದ್ದೆಮಂಪರಿನಿಂದ ಬಸ್ ಪಕ್ಕದ ಜಮೀನಿಗೆ ನುಗ್ಗಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.