ಬಸ್ ಅಪಘಾತ ಚಾಲಕ ಸಾವು.. 20 ಜನ್ರಿಗೆ ಗಾಯ

415

ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಕೆಎಸ್ಆರ್ ಟಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಕುಡ್ಲೂರು ಬಳಿ ನಡೆದಿದೆ.

ಕುಡ್ಲೂರು ಸಮೀಪದ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಕೆಎಸ್ಆರ್ ಟಿಸಿ ಮತ್ತು ಎಸ್ಆರ್ ಎಸ್ ಬಸ್ ನಡುವೆ ಅಪಘಾತ ಸಂಭವಿಸಿದೆ. ಇದ್ರಿಂದಾಗಿ 20 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ತರೀಕೆರೆ, ಬೀರೂರು ಹಾಗೂ ಶಿವಮೊಗ್ಗ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದಾಗಿ 2 ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಾಗಿತ್ತು. ತರೀಕೆರಿ ಹಾಗೂ ಬಿರೂರು ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ, ಟ್ರಾಫಿಕ್ ಕ್ಲೀಯರ್ ಮಾಡಿದ್ರು.




Leave a Reply

Your email address will not be published. Required fields are marked *

error: Content is protected !!