ಸಿಂದಗಿಗೆ ಬರುತ್ತಿದ್ದ ಚುನಾವಣಾ ಸಿಬ್ಬಂದಿ ಬಸ್ ಪಲ್ಟಿ

236

ಪ್ರಜಾಸ್ತ್ರ ಸುದ್ದಿ

ಮುದ್ದೇಬಿಹಾಳ: ಚುನಾವಣೆ ಕರ್ತವ್ಯಕ್ಕೆ ಹೊರಟಿದ್ದ ಬಸ್ ಪಲ್ಟಿಯಾದ ಪರಿಣಾಮ 15 ಜನ ಸಿಬ್ಬಂದಿ ಗಾಯಗೊಂಡ ಘಟನೆ ತಾಲೂಕಿನ ಹಳ್ಲೂರು ಕ್ರಾಸ್ ಹತ್ತಿರ ನಡೆದಿದೆ. ಬಸ್ಸಿನಲ್ಲಿ 40ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತಕ್ಷೇತ್ರಕ್ಕೆ ತರಬೇತಿಗಾಗಿ ಕರೆದುಕೊಂಡು ಹೋಗುತ್ತಿದ್ದಾಗ ಬಸ್ ಎಕ್ಸಲ್ ಕಟ್ ಆಗಿದೆ. ಇದರಿಂದಾಗಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!