ಪ್ರಜಾಸ್ತ್ರ ಸುದ್ದಿ
ವಿಜಯಪುರ: ಇಂಡಿಯಿಂದ ವಿಜಯಪುರಕ್ಕೆ ಹೊರಟಿದ್ದ ಬಸ್ ನ ಮೇನ್ ಘಾಟಕ್ ಕಟ್ ಆಗಿ ರಸ್ತೆ ಪಕ್ಕದ ತಗ್ಗಿನಲ್ಲಿರುವ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.
70 ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನಾಗಠಾಣ ಮತ್ತು ಅಲಿಯಾಬಾದ್ ಮಧ್ಯೆ ಈ ಘಟನೆ ನಡೆದಿದೆ. ಬೇವಿನ ಮರ ಇರದೆ ಹೋಗಿದ್ದರೆ ಬಸ್ ಸೀದಾ ಬಾವಿಗೆ ಬೀಳುತಿತ್ತು. ಅದೃಷ್ಟವಶಾತ್ ದುರಂತವೊಂದು ತಪ್ಪಿದೆ.
ಗಾಯಗೊಂಡಿರುವರು ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.