ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಹತ್ತಿರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆ ಮೇಲೆ ಬಸ್ ಹೋಗಿ ನಿಂತ ಘಟನೆ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ಕಾಲುವೆ ಮೇಲೆ ಹೋಗಿ ನಿಂತುಕೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಬಸ್ ಸೇತುವೆ ಹೋಗಿ ನಿಂತಿರುವ ದೃಶ್ಯ ನೋಡಿದರ ಭಯವಾಗುತ್ತೆ. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ಸಾಕಷ್ಟು ಅನಾಹುತ ಆಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಅಂತಹ ಯಾವುದೇ ಅನಾಹುತ ನಡೆದಿಲ್ಲ. ಹೀಗಾಗಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.