ಸಿಂದಗಿ-ಶಹಾಪೂರ ಹೆದ್ದಾರಿಯಲ್ಲಿ ಬಸ್ ಅಪಘಾತ 3 ಸಾವು

615

ಕೆಂಭಾವಿ: ಪಟ್ಟಣ ಸಮೀಪ ಏವೂರ ಗ್ರಾಮದ ಹತ್ತಿರ ಶಹಾಪೂರ ಸಿಂದಗಿ ರಾಜ್ಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಭೀಕರ ಅಪಘಾತಕ್ಕಿಡಾಗಿದೆ. ಈ ಅನಾಹುತದಲ್ಲಿ ಬಸ್ ಚಾಲಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಂದು ಸಾಯಂಕಾಲ 5ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಇನ್ನು ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಶಾನ್ಯ ಸಾರಿಗೆ ಸಂಸ್ಥೆಯ ಶಹಾಪೂರ ಘಟಕದ ಬಸ್, ಕಲುಬುರಗಿಯಿಂದ ಕೆಂಭಾವಿಗೆ ಬರುವ ಮಾರ್ಗ ಮಧ್ಯೆ ಈ ಅನಾಹುತ ಸಂಭವಿಸಿದೆ.

ಸ್ಥಳಕ್ಕೆ ಕೆಂಭಾವಿ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವನ್ನಪ್ಪಿದ ಮೂವರು ಯಾರು ಏನು ಅನ್ನೋದು ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ.




Leave a Reply

Your email address will not be published. Required fields are marked *

error: Content is protected !!