ಭೀಕರ ಅಪಘಾತದಲ್ಲಿ ಮೂವರ ಸಾವು

164

ಪ್ರಜಾಸ್ತ್ರ ಸುದ್ದಿ

ರಾಯಚೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮಸ್ಕಿ ತಾಲೂಕಿನ ಗುಡದೂರು ಹತ್ತಿರ ಭೀಕರ ಅಪಘಾತ ಸಂಭವಿಸಿ, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ನಾಗರಾಜು(25), ಜಯಪಾಲ(30) ಹಾಗೂ ಸೀನು(30) ಮೃತ ದುರ್ದೈವಿಗಳು.

ಘಟನೆಯಲ್ಲಿ ಶ್ರೀಕಾಂತ್ ಎಂಬಾತನಿಗೆ ಗಾಯಗಳಾಗಿವೆ. ಭತ್ತ ಕಟಾವು ಮಾಡುವ ಯಂತ್ರದ ಸಲುವಾಗಿ ನಾಲ್ವರು ಒಂದೇ ಬೈಕ್ ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!