ಪ್ರಜಾಸ್ತ್ರ ಸುದ್ದಿ
ಮೈಸೂರು: ಹಾಸನ-ಮೈಸೂರು ಹೆದ್ದಾರಿ ಬಳಿ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದಾಗಿ 40 ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಟ್ಯಾಂಕರ್ ನಜ್ಜುಗುಜ್ಜಾಗಿದೆ. ಬಸ್ ಮುಂಭಾಗ ಸಹ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಕೆ.ಆರ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.