ಪ್ರಜಾಸ್ತ್ರ ಸುದ್ದಿ
ಅಂಕೋಲಾ: ಹೊಸ ವರ್ಷದ ಮೊದಲ ದಿನವೇ ರಾಜ್ಯದಲ್ಲಿ ಒಂದಿಷ್ಟು ಕಡೆ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಹತ್ತಿರ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಹತ್ತಿರ ನಡೆದ ಅಪಘಾತದಲ್ಲಿ ತಮಿಳುನಾಡು ಮೂಲದ ನಾಲ್ವರ ಸಾವನ್ನಪ್ಪಿದ್ದಾರೆ. ಹೊಸ ವರ್ಷದ ಸಂಭ್ರಮ ಮುಗಿಸಿಕೊಂಡು ಹೊರಟಿದ್ದ ಸಂದರ್ಭದಲ್ಲಿ ಈ ದುರಂತ ನಡೆದಿದೆ.