ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಯಂಕಂಚಿ ಬಳಿ ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಇಂದು ಸಂಜೆ ಈ ಭೀಕರ ಘಟನೆ ನಡೆದಿದೆ.
ಸಿಂದಗಿಯಿಂದ ಶಹಾಪೂರ ಕಡೆಗೆ ಹೊರಟಿದ್ದ ಬಸ್ ಹಾಗೂ ಯಂಕಂಚಿಯಿಂದ ಸಿಂದಗಿಯತ್ತ ಹೊರಟಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರರಾದ ಯಂಕಂಚಿಯ ರಮೇಶ ಗೌಡಪ್ಪ ಮುಳಸಾವಳಗಿ(35) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಇನ್ನು ಬ್ಯಾಕೋಡ ಗ್ರಾಮದ ತಿಪ್ಪಣ್ಣ ಭೈರೋಡಗಿ(30) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾನೆ. ಇನ್ನೋರ್ವ ಶಿವಪ್ಪ ಕುರನಳ್ಳಿ(28) ಗಂಭೀರವಾಗಿ ಗಾಯಗೊಂಡಿದ್ದು, ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.