ಮುಧೋಳ: ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ, ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ.
36 ವರ್ಷದ ಸಿದ್ದರಾಮ ತೇಲಿ, 34 ವರ್ಷದ ಬಾಲಪ್ಪ ಪೆಂಡಗಿ, 21 ವರ್ಷದ ಹನುಮಂತ ಗನಗಾರ ಹಾಗೂ 25 ವರ್ಷದ ರಿಯಾಜ ಜಲಗೇರಿ ಮೃತ ದುರ್ದೈವಿಗಳಾಗಿದ್ದಾರೆ. ಇವರೆಲ್ಲ ತಾಲೂಕಿನ ಗೋಠೆ ಗ್ರಾಮದವರೆಂದು ತಿಳಿದು ಬಂದಿದೆ.
ಮುಧೋಳದಿಂದ ಧಾರವಾಡಕ್ಕೆ ಹೊರಟಿದ್ದ ಕಾರು ಹಾಗೂ ಬೆಳಗಾವಿಯಿಂದ ಕಲಬುರಗಿ ಕಡೆ ಬರ್ತಿದ್ದ ಬಸ್ ನಡುವೆ ತಡರಾತ್ರಿ ಮುಖಾಮುಖಿ ಅಪಘಾತ ಸಂಭವಿಸಿದೆ. ಬಸ್ ಚಾಲಕ ಕಬ್ಬಿನ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಈ ಅನಾಹುತ ಸಂಭವಿಸಿದೆ ಅಂತಾ ಹೇಳಲಾಗ್ತಿದೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.