ಕಾರ್-ಬಸ್ ಅಪಘಾತ: ಮೂವರ ಸಾವು

403

ತುಮಕೂರು: ಖಾಸಗಿ ಬಸ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಾಘತದಲ್ಲಿ ಮೂವರು ಸಜೀವ ದಹನಗೊಂಡ ದಾರುಣ ಘಟನೆ, ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎನ್.ಹೊಸಹಳ್ಳಿ ನಿವಾಸಿಗಳಾದ 65 ವರ್ಷದ ನರಸಮ್ಮ, 55 ವರ್ಷದ ವಸಂತಕುಮಾರ 55 ವರ್ಷದ ರಾಮಯ್ಯ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನರಸಮ್ಮನವರನ್ನ ನಿಟ್ಟೂರಿಗೆ ಓಮ್ನಿಯಲ್ಲಿ ಕರೆದುಕೊಂಡು ಹೋಗ್ತಿದ್ದ ಟೈಂನಲ್ಲಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದ ಖಾಸಗಿ ಬಸ್ ನಡುವೆ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇದ್ರಿಂದಾಗಿ ಕಾರು ಹಾಗೂ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡು ನೋಡ್ತಿದ್ದಂತೆ ಹೊತ್ತಿ ಉರಿದಿದೆ.

ಕಾರಿನಲ್ಲಿದ್ದ ನರಸಿಂಹಮೂರ್ತಿ, ರಾಧಾಮಣಿ ಹಾಗೂ ರವಿ ಇನ್ನೂ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಬಸ್ ಚಾಲಕ ಪರಾರಿಯಾಗಿದ್ದೇನೆ. ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!