ಪ್ರಜಾಸ್ತ್ರ ಸುದ್ದಿ
ಧಾರ್: ಮಹಾರಾಷ್ಟ್ರದ ಸರ್ಕಾರಿ ಬಸ್ ಮಧ್ಯಪ್ರದೇಶದ ಧಾರ್ ನಲ್ಲಿ ನರ್ಮದಾ ನದಿಗೆ ಉರುಳಿ ಬಿದ್ದ ಪರಿಣಾಮ ಬರೋಬ್ಬರಿ 13 ಜನರ ಮೃತಪಟ್ಟಿದ್ದಾರೆ. 15 ಜನರನ್ನು ರಕ್ಷಣೆ ಮಾಡಲಾಗಿದೆ. ಬಸ್ ನಲ್ಲಿ ಸುಮಾರು 50 ರಿಂದ 60 ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ.
ಇಂದೋರ್ ನಿಂದ ಪುಣೆಗೆ ಹೊರಟಿದ್ದ ಬಸ್ ಧಾರ್ ಜಿಲ್ಲೆಯ ಖಾಲ್ ಘಾಟ್ ಪ್ರದೇಶದಲ್ಲಿ ಸೇತುವೆ ಮುರಿದು ಬಿದ್ದ ಬಸ್ ನದಿಗೆ ಉರುಳಿದೆ. ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.