ಚಿತ್ರದುರ್ಗ ಬಳಿ ಹೊತ್ತಿ ಉರಿದ ವಿಜಯಪುರ ಬಸ್: ಮಕ್ಕಳಿಬ್ಬರು ಸೇರಿ ಐವರ ದಹನ

422

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ, ಹಿರಿಯೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಿರಿಯೂರ ತಾಲೂಕಿನ ಕೆ.ಆರ್ ಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರಂತ ಸಂಭವಿಸಿದೆ. ಇದಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗ್ತಿದೆ. ಬೆಂಕಿ ಕಾಣಿಸಿಕೊಂಡಾಗ ಪ್ರಯಾಣಿಕರು ಕೂಗಿದ್ರೂ ನಿರ್ಲಕ್ಷ್ಯ ತೋರಿದ್ದಾನೆ. ಬಳಿಕ ಬೆಂಕಿ ಇಡೀ ಬಸ್ ಗೆ ವ್ಯಾಪಿಸಿದಾಗ ಬಸ್ ನಿಂದ ಹಾರಿ ಪರಾರಿಯಾಗಿದ್ದಾನೆ ಎಂದು ಹೇಳಲಾಗ್ತಿದೆ.

ಬೆಂಕಿ ಎಲ್ಲೆಡೆ ವ್ಯಾಪಿಸಿದ್ರಿಂದ ಹಲವುರಿಗೆ ಹೊರ ಬರಲು ಆಗಿಲ್ಲ. 32 ಜನ ಪ್ರಯಾಣಿಕರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಕ್ಕೆಶ್ರೀ ಟ್ರಾವೆಲ್ಸ್ ಗೆ ಸೇರಿದ ಬಸ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!