ಕಣಿವೆ ನಾಡಿನಲ್ಲಿ ಬಸ್ ದುರಂತ: 36 ಮಂದಿ ಸಾವು

236

ಪ್ರಜಾಸ್ತ್ರ ಸುದ್ದಿ

ಶ್ರೀನಗರ: ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬರೋಬ್ಬರಿ 36 ಜನರು ಮೃತಪಟ್ಟ ದಾರುಣ ಘಟನೆ ಕಾಶ್ಮೀರದ ದಡೋದಾದಲ್ಲಿ ಬುಧವಾರ ನಡೆದಿದೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಘಟನೆಗೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸಾರ್ ಹತ್ತಿರ ಬಸ್ 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಇದರಿಂದಾಗಿ ಇಷ್ಟೊಂದು ದೊಡ್ಡ ಮಟ್ಟದ ಸಾವು ನೋವು ಸಂಭವಿಸಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!