ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಯರಗಲ್.ಬಿಕೆ ಗ್ರಾಮಕ್ಕೆ ಬಸ್ಸಿನ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಪರದಾಟ ನಟಡಸಿದ್ದಾರೆ. ಇದರಿಂದಾಗಿ ಸರಿಯಾದ ಸಮಯಕ್ಕೆ ಕಾಲೇಜು ತಲುಪಲು ವಿದ್ಯಾರ್ಥಿಗಳಿಗೆ ಆಗುತ್ತಿಲ್ಲ. ಹೀಗಾಗಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿಂದಗಿ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆ ಸಿಂದಗಿ ಬಸ್ ಡಿಪೋದ ಸಾರಿಗೆ ವ್ಯವಸ್ಥಾಪಕರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಎಬಿವಿಪಿ ತಾಲೂಕು ಸಂಚಾಲಕರಾದ ಸಂತೋಷ ನಂದಗೇರಿ, ಪ್ರಕಾಶ ಅಗಸರ, ನಗರ ಕಾರ್ಯದರ್ಶಿ ಭೀರು ಪೂಜಾರಿ, ವಿಶಾಲ್ ನಾಯ್ಕೊಡಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.