ಬಸ್ ಕೊರತೆ: ವಿಜಯಪುರ ಜಿಲ್ಲೆಯಲ್ಲಿ ಜನರ ಪರದಾಟ

171

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಬಸ್ ಗಳ ಕೊರತೆ ಸಾಕಷ್ಟು ಉಂಟಾಗಿದ್ದು, ಜನರು ಪರದಾಡುವಂತಾಗಿದೆ. ನಗರ, ಪಟ್ಟಣದ ನಿವಾಸಿಗಳ ಜೊತೆಗೆ ಗ್ರಾಮೀಣ ಭಾಗದ ಜನರ ಪರಿಸ್ಥಿತಿಯೂ ಹೇಳ ತೀರದಾಗಿದೆ.

ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ಶೈಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳನ್ನು ತೆಗೆದುಕೊಂಡು ಪ್ರವಾಸಕ್ಕೆ ಹೋಗಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮುಗಿಯಬೇಕಿದ್ದ ಪ್ರವಾಸ ಜನವರಿಯಲ್ಲೂ ಮುಂದುವರೆದಿದ್ದು, ಬಸ್ ಗಳ ಅಭಾವ ಸಾರ್ವಜನಿಕರ ಮೇಲೆ ಸಾಕಷ್ಟು ಪರಿಣಾಮ ಬೀರಿದೆ.

ಒಂದು ಬಸ್ ಗಾಗಿ 2 ರಿಂದ 3 ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ. ಇದರ ಜೊತೆಗೆ ನಿಂತುಕೊಳ್ಳಲು ಜಾಗವಿಲ್ಲದಿದ್ದರೂ ಸಾಕಷ್ಟು ಕಷ್ಟಪಡುತ್ತಾ ಬಸ್ ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಮೂಡಿದೆ. ಹೀಗಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾರ್ವಜನಿಕರು ಪ್ರತಿಭಟನೆಯ ಹಾದಿಯನ್ನು ಹಿಡಿಯುತ್ತಿದ್ದಾರೆ. ಆದ್ದರಿಂದ ಕೂಡಲೇ ಸಾರಿಗೆ ಇಲಾಖೆ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!