ಅಥಣಿ: ಕರೋನಾ ಲಾಕ್ ಡೌನ್ ನಿಂದಾಗಿ ಸರ್ಕಾರಿ ಸಾರಿಗೆ ಸೇವೆಗೆ ನಿರ್ಬಂಧ ಹೇರಲಾಗಿದೆ. ಇದೀಗ ನಾಳೆಯಿಂದ ತಾಲೂಕಿನಲ್ಲಿ ಜಿಲ್ಲಾಮಟ್ಟದ ವ್ಯಾಪ್ತಿಯಲ್ಲಿ ಬಸ್ ಸಂಚಾರ ಪ್ರಾರಂಭವಾಗ್ತಿದೆ. ಹೀಗಾಗಿ ಸಾರಿಗೆ ಸಿಬ್ಬಂದಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಸ್ಯಾನಟೈಸರ್ ಮಾರ್ಗಕ್ಕೆ ಚಾಲನೆ ನೀಡಲಾಗಿದೆ.
ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಿದಾನಂದ ಲಕ್ಷ್ಮಣ ಸವದಿ ನಿರ್ಮಿಸಿರುವ ಸೋಂಕು ನಿವಾರಕ ಸುರಂಗ ಮಾರ್ಗವನ್ನ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಉದ್ಘಾಟನೆ ಮಾಡಿದ್ರು. ಬಳಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿಯವರು ಉಪ ಮುಖ್ಯಮಂತ್ರಿಗಳನ್ನ ಗೌರವಿಸಿ ಸನ್ಮಾನಿಸಿದರು. ಈ ವೇಳೆ ಡಿಪೋ ಮ್ಯಾನೇಜರ್ ಹಾಗೂ ಚಾಲಕರು, ನಿರ್ವಾಹಕರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.