ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ವಿವಾದಗಳು ನಡೆಯುತ್ತಲೇ ಇವೆ. ಈಗ ನಗರದಲ್ಲಿ ನಿರ್ಮಾಣ ಮಾಡಿರುವ ಸ್ಥಳೀಯ ಬಸ್ ನಿಲ್ದಾಣಗಳು ವಿವಾದಕ್ಕೆ ದಾರಿ ಮಾಡಿಕೊಟ್ಟಿವೆ. ಗುಂಬಜ್ ಶೈಲಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.
ನಗರದ ಹಲವು ಕಡೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಗುಮ್ಮಟಗಳ ಮೇಲೆ ರಾತ್ರೋರಾತ್ರಿ ಕಳಸ ಇಡಲಾಗಿದೆ. ಈ ಮೂಲಕ ವಿವಾದಕ್ಕೆ ತೆರೆ ಎಳೆಯುವ ಕೆಲಸ ನಡೆದಿದ್ದು ಇದಕ್ಕೆ ಪರ ವಿರೋಧದ ಚರ್ಚೆ ನಡೆದಿದೆ.