ಬಸ್ ಟಿಕೆಟ್ ದರ ಏರಿಕೆ: ಸಾರ್ವಜನಿಕರ ಜೇಬಿಗೆ ಬಿತ್ತು ಕತ್ತರಿ

583

ಬೆಂಗಳೂರು: ಬಸ್ ಟಿಕೆಟ್ ದರ ಏರಿಸುವ ಮೂಲಕ ರಾಜ್ಯ ಸರ್ಕಾರ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಹಾಕಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಶೇಕಡ 12 ರಷ್ಟು ಪ್ರಯಾಣ ದರ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.

ಈ ಸಂಬಂಧ ಬೆಂಗಳೂರು, ಹುಬ್ಬಳ್ಳಿ ಹಾಗೂ ಕಲಬುರಗಿಯಲ್ಲಿರುವ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಯಾಣ ದರ ಪರಿಷ್ಕರಣೆ ಕುರಿತು ಪತ್ರ ಕಳುಹಿಸಲಾಗಿದೆ. ಈ ಮೂಲಕ ಸಾಮಾನ್ಯ ಜನರಿಗೆ ಸಾರಿಗೆ ಸೇವೆ ಮತ್ತಷ್ಟು ದುಬಾರಿಯಾಗಲಿದೆ.

ಈಗಾಗ್ಲೇ ಎಲ್ಲೆಂದರಲ್ಲಿ ಟೋಲ್ ನಿರ್ಮಾಣ ಮಾಡಿ, ಅದಕ್ಕೆ ಕಟ್ಟಬೇಕಾದ ಹಣವನ್ನ ಟಿಕೆಟ್ ದರ ಏರಿಸುವ ಮೂಲಕ ಜನರಿಂದ ಪಡೆಯುತ್ತಿದ್ದು, ಇದೀಗ ಮತ್ತೆ ದರ ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಇನ್ನಷ್ಟು ಹೊರೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!