ವಿಜಯಪುರ: ಸುಟ್ಟು ಭಸ್ಮವಾದ ಬಸ್

273

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜನತಾ ಟ್ರಾವಲ್ಸ್ ಗೆ ಸೇರಿದ ಖಾಸಗಿ ಬಸ್ ವೊಂದು ಸುಟ್ಟು ಕರಕಲಾದ ಹಿಟ್ಟನಹಳ್ಳಿ ಹತ್ತಿರದ ಚಿತ್ರದುರ್ಗ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಟೈಯರ್ ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಬಸ್ಸಿನಿಂದ ಇಳಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಪ್ರಯಾಣಿಕರ ಒಡವೆ, ನಗದು, ವಸ್ತುಗಳು ಸುಟ್ಟು ಹೋಗಿವೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!