ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ 1 ಲೋಕಸಭಾ ಹಾಗೂ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಸಹಜವಾಗಿ ಇಂತಹ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಜನರನ್ನ ಸೆಳೆಯಲು ಸರ್ಕಾರಗಳು ಪ್ರಯತ್ನಿಸುತ್ತವೆ. ಆದ್ರೆ, ಸಿಎಂ ಬಿಎಸ್ವೈ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲ್ಲ ಎಂದಿದ್ದಾರೆ.
ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವು ಗೆಲ್ಲುತ್ತೇವೆ. ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವುದ್ರಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ಶಿವಮೊಗ್ಗದಿಂದ ಬಂದ್ಮೇಲೆ ಬಜೆಟ್ ಸಿದ್ಧತೆ ಅಂತಿಮಗೊಳಿಸುತ್ತೇನೆ ಎಂದು ತಿಳಿಸಿದ್ದಾರೆ.