ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಈಗ ನಡೆಯುತ್ತಿರುವ ಉಪ ಚುನಾವಣೆ ಕದನ ಮುಗಿದ್ಮೇಲೆ ಎಲ್ಲವೂ ಬದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಂದ್ರೆ, ಸಿಎಂ ಬದಲಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲವೂ ಬದಲಾಗುತ್ತೆ. ಕಾಂಗ್ರೆಸ್, ಜೆಡಿಎಸ್ ಗೆ ಮುಖಭಂಗವಾಗುತ್ತೆ ಎಂದರು.
ಬೈ ಎಲೆಕ್ಷನ್ ಬಳಿಕ ದೆಹಲಿಗೆ ತೆರಳಿ ಸಂಪುಟ ಪುನರ್ ರಚನೆ ಬಗ್ಗೆ ಚರ್ಚಿಸಲಾಗುವುದು. ಇನ್ನು ಸಿದ್ದರಾಮಯ್ಯ, ಡಿಕೆಶಿ, ಹೆಚ್.ಡಿ ಕುಮಾರಸ್ವಾಮಿ, ದೇವೇಗೌಡರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ನಾನು ಸಹ ಎರಡು ಕ್ಷೇತ್ರಗಳ ಪ್ರಚಾರದಲ್ಲಿ ಭಾಗಿಯಾಗ್ತಿದ್ದೇನೆ ಎಂದರು.