ಉಪ ಕದನ ರಿಸಲ್ಟ್: ಸಂಪುಟ ಸರ್ಜರಿ ತಯಾರಿ!

287

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬೀಳಲಿದೆ. ಹೀಗಾಗಿ ಮೂರು ಪಕ್ಷಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು ಫಲಿತಾಂಶದ ನಿರೀಕ್ಷೆಯಲ್ಲಿರುವ ಬಿಜೆಪಿಯಲ್ಲಿ ಸಂಪುಟ ಪುನರ್ ರಚನೆಯ ಕಸರತ್ತು ಶುರುವಾಗಿದೆ. ಸಿ.ಟಿ ರವಿಗೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿ ನೀಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತಿ ಖಾಲಿಯಾಗಿದೆ. ಆರ್.ಆರ್ ನಗರದಲ್ಲಿ ಮುನಿರತ್ನ ಗೆದ್ದು ಬಂದ್ರೆ ಸಚಿವ ಸ್ಥಾನ ಎಂದು ಸಿಎಂ ಹೇಳಿದ್ದಾರೆ. ಇತ್ತ ಎಂಎಲ್ ಸಿ ಸಿ.ಪಿ ಯೋಗೇಶ್ವರ ಸಚಿವ ಸ್ಥಾನದ ಲಾಬಿ ನಡೆಸಿದ್ದಾರೆ.

ಇನ್ನು ಉಮೇಶ ಕತ್ತಿ, ಸುನೀಲಕುಮಾರ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಲಿಂಬಾವಳಿ ಸಹ ಸಚಿವ ಸ್ಥಾನದ ರೇಸಿನಲ್ಲಿದ್ದಾರೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ ಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಂಪುಟ ಸರ್ಜರಿ ಮಾಡಿ ಯಾರಿಗೆ ಯಾವ ಖಾತೆ ಕೊಡುತ್ತಾರೆ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!