ಪ್ರಜಾಸ್ತ್ರ ಸುದ್ದಿ
ಮೈಸೂರು: ನಕಲಿ ಸಹಿ ಮಾಡಿ ಬಿ.ಎಸ್ ಯಡಿಯೂರಪ್ಪನವರನ್ನ ಜೈಲಿಗೆ ಕಳುಹಿಸಿದ್ದೆ ವಿಜಯೇಂದ್ರ. ಈಗ ಇಡೀ ಕುಟುಂಬವನ್ನೇ ಜೈಲಿಗೆ ಕಳಿಸಲಿದ್ದಾರೆ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ ಆರೋಪಿಸಿದ್ದಾರೆ.
ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಅವರು, ವಿಜಯೇಂದ್ರ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಹಿಂದುಳಿದ ನಾಯಕರನ್ನ ತುಳಿಯುವ ಕೆಲಸ ನಡೆಯುತ್ತಿದ್ದು, ರಮೇಶ ಜಾರಕಿಹೊಳಿ ಹಾಗೂ ಶ್ರೀರಾಮುಲು ಅವರನ್ನ ಮುಗಿಸಲು ಹೊರಟಿದ್ದಾರೆ ಎಂದು ಗಂಭೀರ ಆರೋಪಗಳನ್ನ ಮಾಡಿದ್ರು.
ಜಾರಕಿಹೊಳಿ ಸಿಡಿ ಕೇಸಿನಲ್ಲಿ ವಿಜಯೇಂದ್ರ ಪಾತ್ರವಿದೆ ಎಂದು ಆರೋಪಿಸಿದ ಅವರು, ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ. ರಾಜಕಾರಣದಲ್ಲಿ ಇದೆಲ್ಲ ಸರಿಯಲ್ಲವೆಂದು ವಾಗ್ದಾಳಿ ನಡೆಸಿದ್ರು.