ಪ್ರಜಾಸ್ತ್ರ ಸುದ್ದಿ
ಕೊಲ್ಕತ್ತಾ: ಕೇಂದ್ರ ಸರ್ಕಾರ ಹೊರಡಿಸಿರುವ ಸಿಎಎ ಅಧಿಸೂಚನೆ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಸೂಚನೆಯಲ್ಲಿನ ನಿಯಮಗಳು ಅಸಂವಿಧಾನಿಕವಾಗಿವೆ. ತಾರತಮ್ಯದಿಂದ ಕೂಡಿವೆ ಎಂದಿದ್ದಾರೆ.
ಹಬ್ರಾದಲ್ಲಿ ಮಂಗಳವಾರ ಮಾತನಾಡಿದ ಅವರು, ಕಾನೂನು ಅಡಿಯಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವವರು ಹಲವು ಬಾರಿ ಯೋಚಿಸಬೇಕು. ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಅವಕಾಶ ನೀಡುವುದಿಲ್ಲ. ಸಿಎಎ ನಿಯಮಗಳಲ್ಲಿ ಯಾವುದೇ ಸ್ಪಷ್ಟತೆಯಿಲ್ಲವೆಂದು ಹೇಳಿದ್ದಾರೆ.