‘ಕಾಂಗ್ರೆಸ್ ನಂತೆ ತುರ್ತು ಪರಿಸ್ಥಿತಿ ಸೃಷ್ಟಿಸಬಾರದು’

457

ಉತ್ತರ ಪ್ರದೇಶ: ಬಿಎಸ್ಪಿ ನಾಯಕಿ ಹಾಗೂ ಮಾಜಿ ಸಿಎಂ ಮಾಯಾವತಿ ಪೌರತ್ವ ಕಾಯ್ದೆ ತಿದ್ದುಪಡಿಯನ್ನ ವಾಪಸ್ ಪಡೆಯುವಂತೆ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ. ಇದ್ರಿಂದ ಮುಂದಿನ ದಿನಗಳಲ್ಲಿ ನಕಾರಾತ್ಮಕ ಪರಿಣಾಮಗಳು ಬೀರುತ್ತವೆ ಅಂತಾ ಹೇಳಿದ್ದಾರೆ.

ಈ ಕುರಿತು ನಮ್ಮ ಪಕ್ಷ ಸಹ ಧ್ವನಿ ಎತ್ತಲಿದೆ. ಅಲ್ದೇ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನ ಭೇಟಿಯಾಗುವುದಾಗಿ ಮಾಯಾವತಿ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ತುರ್ತು ಪರಿಸ್ಥಿತಿಯನ್ನ ಹೇರಿದೆ. ಇದೀಗ ಮತ್ತೆ ಅದೇ ಪರಿಸ್ಥಿತಿ ಸೃಷ್ಟಿಯಾಗಬಾರದು ಅಂತಾ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!