ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಶಾಸಕರು ಇಂದು ಸಿಎಂ ಬಿ.ಎಸ್ ಯಡಿಯೂರಪ್ಪನವರನ್ನ ಭೇಟಿಯಾಗಲಿದ್ದಾರೆ ಅಂತಾ ಹೇಳಲಾಗ್ತಿದೆ. ಜನವರಿ ಮೊದಲ ವಾರದಲ್ಲಿ ಸಿಎಂ ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಚಿವ ಆಕಾಂಕ್ಷಿಗಳು ಸಿಎಂ ಭೇಟಿಗೆ ಮುಂದಾಗಿದ್ದಾರಂತೆ.
ಬಿಜೆಪಿ ಸರ್ಕಾರ ರಚನೆಗೆ ಸಹಕಾರ ನೀಡಿದ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮೊದ್ಲೇ ನಿರ್ಧಾರವಾಗಿದೆ. ಅದ್ರಂತೆ ಅವರಿಗೆ ಮಂತ್ರಿಗಿರಿ ಕೊಡುವ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಜೊತೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿಯೆಂದು ಶಾಸಕರು ಒತ್ತಾಯಿಸಿದ್ದಾರೆ ಅನ್ನೋದು ತಿಳಿದು ಬಂದಿದೆ.
ಸಂಕ್ರಾಂತಿವರೆಗೂ ಸಚಿವ ಸಂಪುಟ ವಿಸ್ತರಣೆಯಿಲ್ಲ ಅನ್ನೋದು ಕೆಲ ಮೂಲಗಳಿಂದ ತಿಳಿದು ಬರ್ತಿದೆ. ಆದ್ರೆ, ಇದಕ್ಕೆ ನೂತನ ಶಾಸಕರ ಒಪ್ಪಿಕೊಳ್ತಿಲ್ಲ ಅನ್ನೋದು ಮತ್ತೊಂದು ಮೂಲದ ಮಾತು. ಹೀಗಾಗಿ ಜನವರಿ ಮೊದಲ ವಾರದಲ್ಲಿಯೇ ಸಂಪುಟ ವಿಸ್ತರಣೆಯಾಗಬಹುದು ಎನ್ನಲಾಗ್ತಿದೆ. ಆದ್ರೆ, ಇದರಲ್ಲಿ ಒಂದಿಷ್ಟು ಸಮಸ್ಯೆಗಳಿವೆ. ಬಿಜೆಪಿಯ ಹಿರಿಯ ಶಾಸಕರು ಸಹ ಮಂತ್ರಿಗಿರಿ ಬೇಕು ಅಂತಿದ್ದಾರೆ. ಈಗಾಗ್ಲೇ ಸಚಿವರಾಗಿರುವವರ ಖಾತೆ ಬದಲಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಹೀಗಾಗಿ ಸಿಎಂ ಬಿಎಸ್ವೈಗೆ ಸಚಿವ ಸಂಪುಟ ವಿಸ್ತರಣೆ ಬಿಸಿ ತುಪ್ಪವಾಗಿರುವುದು ಮಾತ್ರ ಸತ್ಯ.