ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಪ ಚುನಾವಣೆಯಲ್ಲಿ ಗೆದ್ದವರು, ಎಂಎಲ್ ಸಿ ಆದವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಸಿಎಂ ಬಿ.ಎಸ್ ಯಡಿಯೂರಪ್ಪ ಶೀಘ್ರದಲ್ಲಿಯೇ ಸಿಹಿ ಸುದ್ದಿ ನೀಡಲಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾರೂ ಇನ್.. ಯಾರು ಔಟ್ ಅನ್ನೋದು ತಿಳಿಯಲಿದೆ.
ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ವಾಪಸ್ ಬಂದಿದ್ದಾರೆ. ಇನ್ನು 2-3 ದಿನಗಳಲ್ಲಿ ಸಚಿವರ ಲಿಸ್ಟ್ ಬರಲಿದೆ. ಅಲ್ದೇ, ಸಚಿವ ಸಂಪುಟ ವಿಸ್ತರಣೆಯೋ ಪುನರ್ ರಚನೆಯೋ ನೋಡಬೇಕು ಅನ್ನೋ ಮಾತುಗಳನ್ನ ಹೇಳಿದ್ದು, ಕೆಲ ಸಚಿವರಿಗೆ ಟೆನ್ಷನ್ ಶುರುವಾಗಿದೆ.