ಆದಿಚುಂಚನಗಿರಿ ಮಠಕ್ಕೆ 22 ಎಕರೆ ಜಾಗ, ಅಂಬಿ ಸ್ಮಾರಕಕ್ಕೆ 12 ಕೋಟಿ

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾಸನ ಜಿಲ್ಲೆಯ ಹಿರಿಸಾವೆ ಹತ್ತಿರದ ಆದಿಚುಂಚನಗಿರಿ ಮಠಕ್ಕೆ 22 ಎಕರೆ ಭೂಮಿ ಹಾಗೂ ನಟ, ಮಾಜಿ ಸಚಿವ ದಿವಂಗತ ಅಂಬರೀಶ್ ಸ್ಮಾರಕಕ್ಕೆ 12 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಯುಷ್ ಇಲಾಖೆಯಲ್ಲಿ 80 ನರ್ಸ್ ನೇಮಕ, ಈಗಾಗ್ಲೇ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದವರಿಗೆ ಶೇಕಡ 2 ಮಾರ್ಕ್ಸ್, 1 ವರ್ಷದಿಂದ ಸೇವೆ ಮಾಡಿದವರಿಗೆ 10 ವರ್ಷ ಅವಧಿ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಬಾಗಲಕೋಟೆಯ ಸಿಗೇಗಿರಿ ಹಳ್ಳಿಯಲ್ಲಿ 5 ಎಕರೆ ಜಮೀನು ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ ಐಟಿ ಸೇವೆ ನೀಡಲು 406 ಕೋಟಿ ಅನುಮೋದನೆ ಸೇರಿದಂತೆ ವಿವಿಧ ಯೋಜನೆಗಳು, ಹಣ ಬಿಡುಗಡೆ, ಅಭಿವೃದ್ಧಿ ಕೆಲಸದ ಹಣ ಹೆಚ್ಚಳ ಸೇರಿದಂತೆ ಪ್ರಮುಖ ವಿಷಯಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ.




Leave a Reply

Your email address will not be published. Required fields are marked *

error: Content is protected !!