ಸಂಸ್ಕೃತ ವಿವಿಗೆ ಎಲ್ಲೆಡೆ ತೀವ್ರ ವಿರೋಧ

210

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಮಾಗಡಿಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪಿಸಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಅಭಿಯಾನ ನಡೆಸಿವೆ. ಈಗಾಗ್ಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಕನ್ನಡಿಗರ ತೆರಿಗೆ ಹಣದಿಂದ ಸಂಸ್ಕೃತ ವಿವಿ ಸ್ಥಾಪನೆಗೆ ನಮ್ಮ ವಿರೋಧವಿದೆ ಅನ್ನೋ ಕೂಗು ವ್ಯಕ್ತವಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಟ್ವೀಟರ್ ಅಭಿಯಾನ ಶುರುವಾಗಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಚಾಲನೆ ನೀಡಿದ್ದು, ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದ ನಿರ್ಧಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗುತ್ತೆ ಅನ್ನೋ ಎಚ್ಚರಿಕೆಯನ್ನು ಸಾರ್ವಜನಿಕರು, ಕನ್ನಡಪರ ಸಂಘಟನೆಗಳು ನೀಡಿವೆ.




Leave a Reply

Your email address will not be published. Required fields are marked *

error: Content is protected !!