ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕಾಲುವೆ ಒಡೆದು ಜಮೀನುಗಳಿಗೆ ನೀರು ನುಗ್ಗಿದ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಯತ್ನಾಳ ಬಳಿ ನಡೆದಿದೆ. ಇದ್ರಿಂದಾಗಿ ಹೊಲಗಳಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶವಾಗಿವೆ.
ಕಾಲುವೆ ನೀರು ಜಮೀನುಗಳಿಗೆ ನುಗ್ಗಿರುವುದ್ರಿಂದ ಸಜ್ಜೆ, ದ್ರಾಕ್ಷಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿದ್ದು, ರೈತರು ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ನೀರು ನುಗ್ಗಿ ಹಾನಿಯಾದ ಪ್ರದೇಶದ ಬಗ್ಗೆ ಜಿಲ್ಲಾಡಳಿತ ಸಮೀಕ್ಷೆಗೆ ಮುಂದಾಗಿದೆ.