ಬೆಂಗಳೂರಲ್ಲಿ 15ಕ್ಕೂ ಹೆಚ್ಚು ವಿಲ್ಲಾಗಳಿಗೆ ನೋಟಿಸ್

206

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಣಭೀಕರ ಮಳೆಗೆ ಸಿಲಿಕಾನ್ ಸಿಟಿಯ ಪರಿಸ್ಥಿತಿ ಹೇಗಾಗಿದೆ ಅನ್ನೋದು ಪ್ರತಿಯೊಬ್ಬರಿಗೂ ಗೊತ್ತಾಗಿದೆ. ಇದಕ್ಕೆ ಕಾರಣಗಳಲ್ಲಿ ಕೆರೆ ಒತ್ತುವರಿ, ರಾಜಕಾಲುವೆ ಒತ್ತುವರಿ, ಸರ್ಕಾರಿ ಜಾಗಗಳ ಒತ್ತುವರಿ ಮಾಡಿಕೊಂಡಿರುವುದು ಒಂದು. ಹೀಗಾಗಿ ತಡವಾಗಿ ಎಚ್ಚೆತ್ತುಕೊಂಡಿರುವ ರಾಜ್ಯಸರ್ಕಾರ 15ಕ್ಕೂ ಹೆಚ್ಚು ವಿಲ್ಲಾಗಳಿಗೆ ನೋಟಿಸ್ ನೀಡಿದ್ದಾರೆ.

ರೈನ್ ಬೊ ಡ್ರೈವ್ ಲೇಔಟ್ ನಲ್ಲಿ ಜಿಲ್ಲಾಡಳಿತ ಸರ್ವೇ ಮಾಡಿಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾ ನಿರ್ಮಿಸಿರುವುದು ಬಹಿರಂಗಗೊಂಡಿದೆ. ಹೀಗಾಗಿ ತಹಶೀಲ್ದಾರ್ ನೋಟಿಸ್ ನೀಡಿದ್ದು, ವಿಲ್ಲಾಗಳನ್ನು ತೆರವುಗೊಳಿಸಿ, ಇಲ್ಲದಿದ್ದರೆ ನಾವೇ ತೆರವುಗೊಳಿಸುತ್ತೇವೆ. ಅದರ ವೆಚ್ಚ ನೀವೇ ಭರಿಸಬೇಕಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!