ಪ್ರಜಾಸ್ತ್ರ ಸುದ್ದಿ
ಮಂಡ್ಯ: ಮುಂದೆ ಹೋಗುತ್ತಿದ್ದ ಲಾರಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ತಾಲೂಕಿನ ಗೆಜ್ಜಗೆರೆ ಹತ್ತಿರ ನಡೆದಿದೆ. ಮಂಡ್ಯ ನಗರದ ಗುತ್ತಲ ನಿವಾಸಿ ಶರೀಫ್(23) ಹಾಗೂ ಮೈಸೂರಿನ ಕೆಸರೆ ನಿವಾಸಿ ಸದ್ಕಿಕ್ ಪಾಷಾ(25) ಮೃತ ದುರ್ದೈವಿಗಳು.
ಘಟನೆಯಲ್ಲಿ ಇಬ್ಬರು ಯುವತಿಯರು ಸೇರಿ ಮೂವರಿಗೆ ಸಣ್ಣಪುಟ್ ಗಾಯಗಳಾಗಿವೆ. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅನಾಹುತ ನಡೆದಿದೆ. ಮದ್ದೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.